ವಚನ - 1222     
 
ತನುವೆಂಬ ಏರಿಗೆ ಮನವೆಂಬ ಕಟ್ಟೆ, ಆಚಾರವೆಂಬ ಸೋಪಾನದಿಂದ, ಪರಮಾನಂದವೆಂಬ ಜಲವ ತುಂಬಿ ಕೆರೆಯ ಕಟ್ಟಬಲ್ಲವರನಾರನೂ ಕಾಣೆ! ನಾನು ಕಟ್ಟಿದ ಕೆರೆ ಸ್ಥಿರವಾಯಿತ್ತು ಗುಹೇಶ್ವರಾ ನಿಮ್ಮಾಣೆ.