ವಚನ - 1234     
 
ತಾಪತ್ರಯದಲ್ಲಿ ಬೇವ ಒಡಲ ಹಿಡಿದು ತಂದು ಜ್ಞಾನವೆಂಬ ಉರಿಗೆ ಆಹುತಿಯ ಕೊಟ್ಟವನ, ಜ್ಞಾನವೆಂಬ ಕಾಯವ ಹಿಡಿದು ತಂದು ನಿಶ್ಶೂನ್ಯವೆಂಬ ತೇಜದಲ್ಲಿ ಸುಟ್ಟವನ, ನಿಶ್ಶೂನ್ಯವೆಂಬ ಶಬ್ದವ ಸುಟ್ಟು, ಭಸ್ಮವ ಧರಿಸಿದ ಲಿಂಗೈಕ್ಯನ, ಲೋಕದ ಸ್ಥಿತಿ-ಗತಿಯ ಮರೆದು, ನಿರ್ವಾಣದಲ್ಲಿ ನಿಂದವನ, ಗುಹೇಶ್ವರಲಿಂಗದಲ್ಲಿ ತನ್ನ ಮರೆದ ಅಲ್ಲಯ್ಯನ ಕೋಪದಲ್ಲಿ ಕಿಚ್ಚಿನಲ್ಲಿ ಸುಟ್ಟಿಹೆನೆಂಬ ಸಿದ್ಧರಾಮಯ್ಯನನೇನೆಂಬೆನು?