ವಚನ - 1251     
 
ತ್ರಿಭುವನವೆಂಬ ಪಂಜರದೊಳಗೆ, ಸಂಸಾರಚಕ್ರದಲ್ಲಿ- ಹೊನ್ನು ಪ್ರಾಣವೆ ಪ್ರಾಣವಾಗಿ, ಹೆಣ್ಣು ಪ್ರಾಣವೆ ಪ್ರಾಣವಾಗಿ ಮಣ್ಣು ಪ್ರಾಣವೆ ಪ್ರಾಣವಾಗಿ, ಆ ಸುಖದ ಸೊಕ್ಕಿನಲ್ಲಿ ಈಸಿಯಾಡುತ್ತಿರ್ದರಲ್ಲಾ, ಬಹುವಿಧದ ವ್ಯವಹಾರ ವೇಧಿಸಿದವರು ಗುಹೇಶ್ವರಾ.