ವಚನ - 1272     
 
ನವಖಂಡಪೃಥ್ವಿ, ಚತುರ್ದಶಭುವನಗ್ರಾಮದಿಂದತ್ತತ್ತ ಮುನ್ನ ಅನಾದಿಯಲ್ಲಿ, ಜಂಗಮವೆ ಲಿಂಗವೆಂಬಿರಿ. ಇದೇನಿ ಭೋ, ಎಡೆಯಲ್ಲಿ ಕೊಲೆಯಾಯಿತ್ತು! ಭಕ್ತಿ ಹಿಂದುಮುಂದಾಯಿತ್ತು, ರಕ್ಕಸರ ಪರಿಯಾಯಿತ್ತು! ಇದ ಕಂಡು ಬೆರಗಾದೆ ಗುಹೇಶ್ವರಾ!