ವಚನ - 1320     
 
ನೋಡು ನೋಡಾ ಸಿದ್ಧರಾಮಯ್ಯಾ; ಆಗಳೆ ಭಕ್ತರಿಗೆ ಅಹಂಕಾರವಾಯಿತ್ತು. ಭೃತ್ಯನಿದ್ದೆಡೆಗೆ ಕರ್ತನೈತಂದಡೆ ಅಟ್ಟಾಟಿಕೆಯಲ್ಲಿ ಇಂತು ಕರೆದವರುಂಟೆ? ಬಸವಣ್ಣನೊಳಗೆ ಇಂತು ಮರವೆ ಹುಟ್ಟಿದ ಬಳಿಕ ಉಳಿದ ಶಿವಭಕ್ತರ ಪಾಡೇನು ಹೇಳಾ? ಗುಹೇಶ್ವರಲಿಂಗವನು ಭಕ್ತಿರತಿಯಿಂದ ಮನಮುಟ್ಟಿ ಕರೆದಡೆ ಹೋಹುದಲ್ಲದೆ ವ್ಯರ್ಥಕ್ಕೆ ಹೋಗಲಾಗದು ನೋಡಯ್ಯಾ.