ವಚನ - 1343     
 
ಪೃಥ್ವಿಯ ಮೇಲೊಂದು ಪರಮಶಾಂತಿ ಎಂಬ ಪರ್ವತವ ಕಂಡೆ. ಆ ಪರ್ವತದ ಮೇಲೆ ಪರಮಗುರು ಪರಿಯಾಯವಾಯಿತ್ತ ಕಂಡೆ. ಆ ಪರಿಯಾಯ ಗುರು ಒಂದು ಕಥನದಿಂದ ದೃಷ್ಟಿ ತೆರೆಯಿತ್ತ ಕಂಡೆ. ಆ ದೃಷ್ಟಿಯ ಬೆಳಗಿನಿಂದ ನೆತ್ತಿಯ ಕಲಶ ಪುಟದೋರುತ್ತ ನಡೆದು ಸಸಿಯಾಯಿತ್ತ ಕಂಡೆ. ಆ ಸಸಿಯ ಕೆಳಗಣ ಮೃತ್ತಿಕೆ, ಭಕ್ತರಿಗೆ ಮೂರಾಯಿತ್ತ ಕಂಡೆ ಗುಹೇಶ್ವರಾ