ವಚನ - 1369     
 
ಬಸವಣ್ಣ ಎಂಬಲ್ಲಿ ಎನ್ನ ಕಾಯ ಬಯಲಾಯಿತ್ತು. ಚೆನ್ನಬಸವಣ್ಣ ಎಂಬಲ್ಲಿ ಎನ್ನ ಪ್ರಾಣ ಬಯಲಾಯಿತ್ತು. ಈ ಉಭಯಸ್ಥಲ ನಿರ್ಣಯದ ನಿಷ್ಪತ್ತಿ, ಗುಹೇಶ್ವರಲಿಂಗ ಸಾಕ್ಷಿಯಾಗಿ ಚೆನ್ನಬಸವಣ್ಣನಿಂದ ಸಾಧ್ಯವಾಯಿತ್ತು ಕಾಣಾ ಸಂಗನಬಸವಣ್ಣಾ.