ವಚನ - 1380     
 
ಬೆಂಕಿ ಸುಡಬಲ್ಲಡೆ ಕಲ್ಲು ನೀರು ಮರಂಗಳಲ್ಲಡಗಬಲ್ಲುದೆ? ಅರಿವು ಶ್ರೇಷ್ಠವೆಂದಡೆ ಕುರುಹಿನಲ್ಲಡಗಿ ಬೇರೊಂದೆಡೆಯುಂಟೆಂದು ನುಡಿವಾಗ ಅದೇತರಲ್ಲಿ ಒದಗಿದ ಅರಿವು? ಪಾಷಾಣದಲ್ಲಿ ಒದಗಿದ ಪ್ರಭೆಯಂತೆ, ಆ ಪಾಷಾಣ ಒಡೆಯೆ ಆ ಪ್ರಭೆಗೆ ಕುರುಹುಂಟೆ? ಇಂತೀ ಲೇಸಪ್ಪ ಕುರುಹನರಿಯಬೇಕು ಕಾಣಾ, ನಮ್ಮ ಗುಹೇಶ್ವರನುಳ್ಳನ್ನಕ್ಕ ಅಂಬಿಗರ ಚೌಡಯ್ಯ.