ವಚನ - 1381     
 
ಬೆಳಗಪ್ಪ ಜಾವದಲ್ಲಿ ಲಿಂಗವ ಮುಟ್ಟಿ ಪೂಜಿಸಿ ಪ್ರಾತಃಕಾಲದಲ್ಲಿ ಜಂಗಮದ ಮುಖದ ನೋಡಿದಡೆ, ಹುಟ್ಟಿದೇಳು ಜನ್ಮದ ಪಾಪ ಹಿಂಗುವುದು. ಅದೆಂತೆಂದಡೆ: `ಸೂರ್ಯೋದಯವೇಲಾಯಾಂ ಯಃ ಕರೋತಿ ಶಿವಾರ್ಚನಂ| ಋಣತ್ರಯ ವಿನಿರ್ಮುಕ್ತೋ ಯಸ್ಯಾಂತೇ ಬ್ರಹ್ಮ ತತ್ಪದಂ||'- ಎಂದುದಾಗಿ ಇಂತಪ್ಪ ಸತ್ಕ್ರೀ ಇಲ್ಲದವರನೊಲ್ಲ ನಮ್ಮ ಗುಹೇಶ್ವರ.