ವಚನ - 1418     
 
ಮಣಿಯನೆಣಿಸಿ ದಿನವ ಕಳೆಯಬೇಡ. ಕಣಿಯ ಪೂಜಿಸಿ ದಿನವ ಕಳೆಯಬೇಡ. ಕ್ಷಣವಾದಡೆಯೂ ಆಗಲಿ ನಿಜದ ನೆನಹೆ ಸಾಕು. ಬೆಂಕಿಯಲುಳ್ಳ ಗುಣ ಬಿಸಿನೀರಲುಂಟೆ ಗುಹೇಶ್ವರಾ?