ವಚನ - 1422     
 
ಮನಕ್ಕೆ ಮನ ಏಕಾರ್ಥವಾಗಿ, ಕಾಯಕ್ಕೆ ಕಾಯ ಸಮದರ್ಶನವಾಗಿ ಪ್ರಾಣಕ್ಕೆ ಪ್ರಾಣ ಸಮಕಳೆಯಾಗಿ ಇದ್ದವರಲ್ಲಿ- ಮನ ವಚನ ಕಾಯದಲ್ಲಿ ಶಬ್ದಸೂತಕ ಹುಟ್ಟಿದಡೆ ಸೈರಿಸಬಾರದು ಕೇಳಾ. ನಮ್ಮ ಗುಹೇಶ್ವರಲಿಂಗದಲ್ಲಿ ನೀನು ಭಕ್ತನಾದ ಕಾರಣ, ಮುಳಿಸು ಮೊಳೆದೋರಿತ್ತು ಕಾಣಾ, ಸಂಗನಬಸವಣ್ಣಾ.