ವಚನ - 1430     
 
ಮನವ ತೊಳೆದು ನಿರ್ಮಲವ ಮಾಡಿಹೆನೆಂಬ ಯೋಗವೆಂತುಟೊ? ಮನವ ಹಿಡಿದು ತಡೆದಿಹೆನೆಂಬವರ ಮರುಳುಮಾಡಿ ಕಾಡಿತ್ತು ನೋಡಾ ಮನವು! ಮನ ವಿಕಲ್ಪಜ್ಞಾನದಿಂದರಿದು, ಅದ ಶುದ್ಧವ ಮಾಡಿಹೆನೆಂಬುದು ತಾನೆ ಮನ ನೋಡಾ. ನಮ್ಮ ಗುಹೇಶ್ವರಲಿಂಗದ ಅನುವನರಿದಿಹೆನೆಂಬವರು, ಮನವಿಲ್ಲದಿರಬೇಕು ನೋಡಾ ಸಿದ್ಧರಾಮಯ್ಯಾ.