ವಚನ - 1447     
 
ಮುಕ್ತಿಗೆ ಮುಖವಾಗಿ ಯುಕ್ತಿಗೆ ಹೊರಗಾಗಿ ಅರಿವಿಂಗೆ ಅರಿವಾಗಿಪ್ಪ ಭೇದ ಕಾಣಬಂದಿತ್ತು ನೋಡಾ! ಅರಿವರಿತು ಮರಹು ನಷ್ಟವಾಗಿಪ್ಪುದು ನಿನ್ನಲ್ಲಿ ಸನ್ನಿಹಿತವಾಗಿತ್ತು. ಗುಹೇಶ್ವರನ ಶರಣ ಅಜಗಣ್ಣನ ನಿಲವು ಬಯಲ ಬೆರಸಿದ ಮರೀಚಿಯಂತಾಯಿತ್ತು, ಬೆರಸಿ ನೋಡಾ ಬೇರಿಲ್ಲದ.