ವಚನ - 1472     
 
ರೂಪಿಂಗೆ ಬಂದು ನಿಂದುದು ಮಾತಿಂಗೆ ಒಡಲಾಯಿತ್ತು. ಮಾತಿಂಗೆ ವೇಧಿಸಿದ ಮನ ರಾಟಾಳದ ಕುಂಭದಂತೆ. ಅದ ನೇತಿಗಳೆದು ನಿಂದಲ್ಲಿ ಗುಹೇಶ್ವರಲಿಂಗ ತಾನೆ ಸಂಗನಬಸವಣ್ಣಾ.