ವಚನ - 1497     
 
ವಾಙ್ಮನಕ್ಕತೀತವಾದ ಪರಶಿವನೆ ಪರಮಾತ್ಮಸ್ವರೂಪನಾಗಿ ವಿಶ್ವವೆಂಬ ನಾಣ್ಣುಡಿಯ ತೆರೆಯ ಸೀರೆಯ ಮರೆಯಲ್ಲಿ. ಸಕಲ ಭೋಗಾದಿಭೋಗಂಗಳ ಭೋಗಿಸುತಿಪ್ಪಿರಿ. ಗುಹೇಶ್ವರಾ ನಿಮ್ಮ ನಿಲವಿನ ಪರಿಣಾಮದ ಸುಖವ ನೀವೆ ಬಲ್ಲಿರಿ.