ವಚನ - 1500     
 
ವಾರಿಕಲ್ಲ ಪುತ್ಥಳಿಯ ಅಪ್ಪು ಕೊಂಡಂತಾಯಿತ್ತು. ಅಗ್ನಿ ಪುರುಷನ ಮುಸುಕ ತೆಗೆದ ಕರ್ಪುರದಂತಾಯಿತ್ತು. ಕತ್ತಲೊಳಗೆ ರವಿಯ ಬೆಳಗು ಹೊಕ್ಕಂತಾಯಿತ್ತು. ಗುಹೇಶ್ವರನ ಶರಣ ಮಡಿವಾಳ ಮಾಚಿತಂದೆಯ ಕೃಪೆಯಿಂದ ಬಸವಣ್ಣಾ ನಿನ್ನ ಕಂಡೆನು. ನಿನ್ನನ್ನು ಮಡಿವಾಳನನು ನೀನೆಂದೆ ಕಂಡೆನಯ್ಯಾ.