ವಚನ - 1521     
 
ಶೀಲ ಶೀಲವೆಂದೇನೊ, ತನುಮನಧನವೆಂಬ ತ್ರಿಪುರವಿರಲು? ಆ ತ್ರಿಪುರಸಂಹಾರವ ಮಾಡಿ ಭಸ್ಮಾಂಗಿಯಾದಲ್ಲದೆ ಶೀಲವಿಲ್ಲ ಕಾಣಾ ಗುಹೇಶ್ವರಾ.