ವಚನ - 1529     
 
ಶ್ವೇತನ ಕರೆಯಬಂದ ದೂತರು, ರಂಭೆಯ ಕಣ್ಣ ಮುಂದೆ ಅಲೆಯುತ್ತಿರಲು ಇನ್ನೇಕೆ ಮರವೆ? ಇಹಕ್ಕೆ ದಿಟ ಪರಕ್ಕೆ ಪರಿಣಾಮ; ಪಯಣಕ್ಕೆ ನಿಶ್ಚಯ ಕಾಣಾ ಗುಹೇಶ್ವರಾ.