ವಚನ - 1530     
 
ಶ್ವೇತ ಪೀತ ಕಪೋತ ಹರಿತ ಕೃಷ್ಣ ಮಾಣಿಕವೆಂಬ ಆರು ವರ್ಣ. ಅದಕ್ಕೆ ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಶ್ರೀಗುರು-ಎಂಬ ಆರು ಅಧಿದೇವತೆ, ಈ ಭೇದವನೆಲ್ಲ ತಿಳಿದು ನೋಡಿ, ಉನ್ಮನಿಯ ಜ್ಯೋತಿಯ ಬ್ರಹ್ಮರಂಧ್ರದ ಸಹಸ್ರದಳ ಪದ್ಮದ ಅಮೃತಬಿಂದುವಿನೊಳಗಣ ಪ್ರಾಣವೆ ರೂಪಾಗಿ, ಪ್ರಾಣಲಿಂಗದಲ್ಲಿ ಒಡಗೂಡಬಲ್ಲ ಗುಹೇಶ್ವರಾ ನಿಮ್ಮ ಶರಣ.