ವಚನ - 1541     
 
ಸತ್ತ ಬಳಿಕ ಲಿಂಗದೊಳಗಾದೆಹೆವೆಂಬುದು ಎತ್ತಣ ವಾರ್ತೆ? ಅದು ಹುಸಿ ನೋಡಾ. ಸಾಯದ ಮುನ್ನ ನಿಜವನರಿದು ಸ್ವಯವಾಗಿ ನಡೆಯಬಲ್ಲಡೆ ಗುಹೇಶ್ವರಲಿಂಗವನರಿದ ಶರಣರು ಒಲಿವರು ಕಾಣಾ ಸಿದ್ಧರಾಮಯ್ಯಾ.