ವಚನ - 1548     
 
ಸಮತೆ ಎಂಬ ಕಂಥೆ ತೊಟ್ಟು, ಸುಬುದ್ಧಿ ಎಂಬ ಟೊಪ್ಪರವನಿಕ್ಕಿ, ವಿಷಯವೆಂಬ ಹಾವುಗೆಯ ಮೆಟ್ಟಿ, ತಮಂಧವೆಂಬ ಕುಳಿಯ ಬೀಳದೆ, ಕ್ರೋಧವೆಂಬ ಕೊರಡ ಎಡಹದೆ, ಮದವೆಂಬ ಚೇಳ ಮೆಟ್ಟದೆ ಗುಹೇಶ್ವರನ ಶರಣ ಬಂದೆನು, ಭಕ್ತಿಭಿಕ್ಷವನಿಕ್ಕೈ ಸಂಗನಬಸವಣ್ಣಾ.