ವಚನ - 1554     
 
ಸಹಜವ ನುಡಿದಡೆ ಸೇರುವರಿಲ್ಲ ಕಾಣಿರಣ್ಣಾ. ಅಸಹಜಕ್ಕಲ್ಲದೆ ಲೋಕ ಭಜಿಸದು. ಕೆರೆಯ ಕಟ್ಟಿಸುವನ ಕಂಡು ಒಡ್ಡರಾಮಯ್ಯನೆಂದಡೆ ಮುಳಿಸಿನಿಂದ ಲಿಂಗತನುವ ನೋಯಿಸುವರೆ? ನಮ್ಮ ಗುಹೇಶ್ವರಲಿಂಗವು ಜಗದೊಳಗೆ ಪರಿಪೂರ್ಣವಾದ ಕಾರಣ, ಶರಣರ ನೋವು ಮರಳಿ, ಪಾತಕರ ತಾಗಿದಡೆ, ಅಲ್ಲಯ್ಯ ನೋಡಿ ನಗುತಿರ್ದನು.