ವಚನ - 1558     
 
ಸಾವನ್ನಕ್ಕರ ಶ್ರವವ ಮಾಡಿದಡೆ, ಇನ್ನು ಕಾದುವ ದಿನವಾವುದು? ಬಾಳುವನ್ನಕ್ಕರ ಭಜಿಸುತ್ತಿದ್ದಡೆ, ತಾನಹ ದಿನವಾವುದು? ಅರ್ಥವುಳ್ಳನ್ನಕ್ಕರ ಅರಿವುತ್ತಿದ್ದಡೆ, ನಿಜವನೆಯ್ದುವ ದಿನವಾವುದು? ಕಾರ್ಯಕ್ಕೆ ಬಂದು, ಆ ಕಾರ್ಯ ಕೈಸಾರಿದ ಬಳಿಕ ಇನ್ನು ಮರ್ತ್ಯಲೋಕದ ಹಂಗೇಕೆ? ತನಿರಸ ತುಂಬಿದ ಅಮೃತಫಲ ಒಮ್ಮಿಗೆ ತೊಟ್ಟುಬಿಡುವುದು ನೋಡಿರೆ, ದೃಷ್ಟಾಂತವ! ಬಸವಣ್ಣ ಚೆನ್ನಬಸವಣ್ಣ ಮೊದಲಾದ ಪ್ರಮಥರು ಗುಹೇಶ್ವರಲಿಂಗದಲ್ಲಿ ನಿಜವನೈದಿ ನಿಶ್ಚಿಂತರಾಗಿರಯ್ಯಾ.