ವಚನ - 1583     
 
ಹರನ ಕರುಣವ ಪಡೆದ ಸಾಮರ್ಥ್ಯದ ಬಲುಹಿಂದ, ಶಿವಶರಣರೊಡನೆ ಸೆಣಸಿದಡೆ ಲೇಸುಂಟೆ? ಅಘಟಿತಘಟತರಿಗೆ ಅಘಟಿತರುಂಟು ನೋಡಾ! ನೊಸಲಲೊಬ್ಬ ಕಣ್ಣ ತೆಗೆದಡೆ, ಅಂಗಾಲಲೊಬ್ಬ ಕಣ್ಣ ತೆಗೆವನು. ಗುಹೇಶ್ವರನ ಶರಣರು ಉಪಮಾತೀತರು.