ವಚನ - 1586     
 
ಹರಿಹರಿ ಎಂದಡೆ ಹರಿದರಯ್ಯಾ ಹನ್ನಿಬ್ಬರು ಪರಿಚಾರಕರು. ಹರಿದು ಬಂದು ಚರಣಕ್ಕೆರಗಿ ಬಿಜಯಂಗೆಯ್ಸಿ ಎಂದೆನೆ? ಬಿಜಯಂಗೆಯ್ಯದಿರಲು, ಕರವಾಳ ಶಿರಕಿಕ್ಕಿ ಸೆಳೆದು ನೋಡಿದರು. ನಿರವಯಲ ತನು ಖಡ್ಗಕ್ಕೆ ಸಿಲುಕುವುದೆ? ಹಿರಿಯರಾರೊ? ಕಿರಿಯರಾರೊ? ಭಕ್ತಿಯ ಸಕೀಲವ ಬಲ್ಲವರಾರೊ? ಶಿರ ಹೋದ ಬಳಿಕ ಸರವೆಲ್ಲಿಯದೊ? ಸಬುದವೆಲ್ಲಿಯದೊ? ಶಿವಶರಣರ ಅಂತರಂಗವನರಿಯದೆ ಮರುಳಾದನು ನೋಡಾ ನಮ್ಮ ಗುಹೇಶ್ವರಲಿಂಗದಲ್ಲಿ ಸಂಗನಬಸವಣ್ಣನು!