ವಚನ - 1587     
 
ಹಲವು ಮಕ್ಕಳ ತಾಯಂತೆ, ಹೇಸದೆ ಅವರನಾರೈದ ತನುಸಮರ್ಥವು ನಿಮಗಲ್ಲದೆ ಇನ್ನಾರಿಗೆ ಅಳವಡುವದು? ಮುನ್ನಾರಿಗೆ ಅಳವಡುವದು? ಇನ್ನು ಎನ್ನಳವೆ ನಿಮ್ಮುವನು ತಿಳಿಯಲು? ಮುನ್ನಿನ ಸುಕೃತ ಉಂಟಾಗಿ ನಿಮ್ಮ ಪಾದ ದೊರೆಕೊಂಡಿತ್ತು! ಇನ್ನು ನಮ್ಮನಿಳಿಯ ಬಿಡದೆ, ಎನ್ನುವನು ಇವನೆಂದು ವಿವರಿಸಿ, ಎನ್ನ ನಿಮ್ಮತ್ತ ತೆಗೆ ಕರುಣಿಸಿ. ಎನ್ನ ಮಾತಾಪಿತ-ಗುಹೇಶ್ವರಾ, ನಿಮ್ಮ ಶರಣ ಮಡಿವಳ ಮಾಚಯ್ಯನಿಂದ ಬಯಲಾದೆನು, ಮುಕ್ತನಾದೆನು ನಿಮ್ಮ ಕರುಣದಿಂದ!