ವಚನ - 1591     
 
ಹಸಿವು ತೃಷೆ ವಿಷಯ ವ್ಯಸನ ಈ ನಾಲ್ಕು ಉಳ್ಳವರು ಗುಹೇಶ್ವರಲಿಂಗದಲ್ಲಿ ಐಕ್ಯರೆಂತಪ್ಪರೊ? ಅರಿದರಿದು ಆಚರಿಸಲರಿಯದ ಕಾರಣ ಲಿಂಗೈಕ್ಯರಲ್ಲ. ಅರಿದನಾದಡೆ ಹಸಿವ ಮೀರಿ ಉಂಬ, ತೃಷೆಯ ಮೀರಿ ಕೊಂಬ, ವಿಷಯವನಾಳಿಗೊಂಬ, ವ್ಯಸನವ ದಾಂಟಿ ಭೋಗಿಸುವ. ಇದನರಿಯದಲೆ ಚರಿಸುವ ಕೀಟಕ ಮಾನವರ ಕಂಡು ಎನ್ನ ಮನ ನಾಚಿತ್ತು ಗುಹೇಶ್ವರಾ.