ವಚನ - 16     
 
ನೆಲದ ಬೊಂಬೆಯ ಮಾಡಿ, ಜಲದ ಬಣ್ಣವನುಡಿಸಿ, ಹಲವು ಪರಿಯಾಶ್ರಮದಲ್ಲಿ ಉಲಿವ ಗೆಜ್ಜೆಯ ಕಟ್ಟಿ, ವಾಯುವನಲನ ಸಂಚಕ್ಕೆ ಅರಳೆಲೆಯ ಶೃಂಗಾರವ ಮಾಡಿ, ಆಡಿಸುವ ಯಂತ್ರವಾಹಕನಾರೋ? ಬಯಲ ಕಂಬಕ್ಕೆ ತಂದು ಸಯವೆಂದು ಪರವ ಕಟ್ಟಿದಡೆ ಸಯವದ್ವಯವಾಯಿತ್ತು-ಏನೆಂಬೆನು ಗುಹೇಶ್ವರಾ!