ವಚನ - 1603     
 
ಹೂವ ಕೊಯ್ಯ ಹೋದಡೆ, ಹೂವಿನ ಮೇಲೊಂದು ಗಿಡ ಹುಟ್ಟಿತ್ತು. ಹೂವಿನ ಸೊಂಪುವನಾರೂ ಕಂಡವರಿಲ್ಲ. ಹೂವಿನ ಗುಂಪವನಾರೂ ಬಲ್ಲವರಿಲ್ಲ. ಹೂವ ಕೊಯ್ಯದೆ ಗಿಡವ ಕಡಿಯದೆ ನೇಮ ಸಂದುದು ಗುಹೇಶ್ವರಾ.