ವಚನ - 24     
 
ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ ಪರಿಯನೇನೆಂಬೆನಯ್ಯಾ? ಘನವನೊಳಕೊಂಡ ಮನದ ಮಹಾನುಭಾವಿಗಳ ಬಳಿವಿಡಿದು ಬದುಕುವೆನಯ್ಯಾ. ಅಯ್ಯಾ, ನಿನ್ನಲ್ಲಿ ನಿಂದು ಬೇರೊಂದರಿಯದ ಲಿಂಗಸುಖಿಗಳ ಸಂಗದಲ್ಲಿ ದಿನವ ಕಳೆಯಿಸಯ್ಯಾ ಚೆನ್ನಮಲ್ಲಿಕಾರ್ಜುನಾ.