ವಚನ - 28     
 
ಅಯ್ಯಾ, ನಿಮ್ಮ ಶರಣರ ಕೂಡಿದ ಸುಖವನುಪಮೆಗೆ ತರಬಾರದಯ್ಯಾ. ಅಯ್ಯಾ, ನಿಮ್ಮ ಮಹಂತರ ಕೂಡಿ ಅಗಲುವ ಧಾವತಿಗಿಂತ ಸಾವುದೇ ಕರಲೇಸಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮನರುಹಿದ ಮಹಿಮರನಗಲಿ ಆನು ನಿಲ್ಲಲಾರೆನಯ್ಯಾ.