ವಚನ - 9     
 
ಅಂಗವಿಸದಿರು ಇನ್ನು ಹಿಂಗಿಹೋಗೆಂದೆನುತ ಮಂಗಳಾತ್ಮಕ ನುಡಿದ ಗುರುಕರುಣದಾ ಅಂಗವಿಸದಿರು ಎಂದನಂಗಹರ ಪ್ರಭುರಾಯ ಬಂದು ನೂಕಿದನೆನ್ನನೇಡಿಸುವ ಮಾಯೆಯನು. ಮಂಗಳಾತ್ಮಕ ಕಪಿಲಸಿದ್ಧಮಲ್ಲೇಶ್ವರನೆ ಲಿಂಗ, ನಿಮ್ಮನು ಅರಿವೆ; ಮಾಯೆಯ ಗೆಲುವೆ ಪ್ರಭುವಿನಂದದಲಿ.