ವಚನ - 12     
 
ಅಂಗಾಲಕೋಪವ ಮನಕ್ಕೆ ತಂದಿಪ್ಪವನ, ಆ ಮನದ ಕೋಪವ ಹೃದಯದಲ್ಲಿಟ್ಟುಕೊಂಡಿಪ್ಪವನ ಅವನ ಪಾದಕ್ಕೆ ಎನ್ನ ನೊಸಲ ತಂಪ ತಂದು ತಳಿವೆ, ಎನ್ನ ನೊಸಲ ಅಮೃತದಿಂದ ಅವನ ಮನವ ತಿಳುಹುವೆ, ಕಪಿಲಸಿದ್ಧಮಲ್ಲಿಕಾರ್ಜುನನ.