ವಚನ - 19     
 
ಅಂದು ಬಸವಣ್ಣ ಬಂದು ಜರಿದು ಹೋದುದ ಮರೆದೆನೆ ಆ ನೋವ! ಜರಿದುದೆ ಎನಗೆ ದೀಕ್ಷೆಯಾಯಿತ್ತು! ಆ ದೀಕ್ಷೆಯ ಗುಣದಿಂದ ಫಲಪದಕ್ಕೆ ದೂರವಾದೆ. ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ಬಸವಣ್ಣನೆನ್ನ ಪರಮಾರಾಧ್ಯ!