ವಚನ - 37     
 
ಅಣ್ಣಗಳು ಕೇಳಿರೆ, ಅಣ್ಣಗಳು ಕೇಳಿರೆ, ಲೋಹಿತೇಶ್ವರದೇವರ ಮರೆ ಬಂದು ಒರಸೀತು, ಸುವರ್ಣದ ಕಳಸ ವೆಜ್ಜವಾದೀತು, ಜಪತಾವಡ ಮಣಿ ಹರಿದಾವು, ಗುರುಹಿರಿಯರೆಲ್ಲಾ ಹೆಡೆಗುಡಿಯ ಕಟ್ಟಿಗೊಳಗಾದಾರು ಕಪಿಲೆ ಬಾಣಸಕ್ಕೆ ಬಂದೀತು, ಸೊನ್ನಲಿಗೆಯ ಪುಣ್ಯಕ್ಷೇತ್ರವಳಿದೀತು ಇಂತೀ ಎನ್ನ ಕಪಿಲಸಿದ್ಧಮಲ್ಲಿಕಾರ್ಜುನದೇವರು ಇಲ್ಲಿಯೂ ಇಲ್ಲ, ಅಲ್ಲಿಯೂ ಇಲ್ಲ.