ವಚನ - 58     
 
ಅಯ್ಯ ಬಂದಾನವ್ವಾ, ತನು ಚಿತ್ತ ಶುದ್ಧವಾಗಿರು. ಅಯ್ಯ ಬಂದಾನವ್ವಾ, ಮನವ ಮಂಚವ ಮಾಡಿ ಪಚ್ಚಡಿಸಿರು. ಅಯ್ಯ ಬಪ್ಪುದ ಕಂಡಳು ಚಿದಂಗನೆ, ಅಯ್ಯ, ಶುದ್ಧ ಸಂಗಮಕೆ ಒಬ್ಬನೆ ಬಂದನು, ಕಪಿಲಸಿದ್ಧಮಲ್ಲಿಕಾರ್ಜುನಯ್ಯನು.