ವಚನ - 67     
 
ಅಯ್ಯಾ, ಗುರುವೆಂಬ ಮಹಾಜ್ವಾಲೆಯಲ್ಲಿ ದಹನವಾದೆ ಬಸವಾಕ್ಷರವೆಂಬ ಮರುಜೇವಣಿಯಲ್ಲಿ ಭವಿಸಿದೆ ಉಂಡೆ ನಾನು ಶಿಶುವಾಗಿ ಶುದ್ಧಸಿದ್ಧಪ್ರಸಿದ್ಧವೆಂಬ ಪ್ರಸಾದತ್ರಯ ಏಕೀಭವಿಸಿ ಕೊಂಡೆ ಎನಗಿನ್ನರಿದಿಲ್ಲ. ನೀನೊಟ್ಟಿತ್ತೆ ಮಾರಿದ ಮಾರಿಂಗೆ ಸಂದೆ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.