ವಚನ - 71     
 
ಅಯ್ಯಾ, ನಿತ್ಯನು ನೀನೆ; ಆ ಸತ್ಯಶುದ್ಧ ದೇಹಿ ನೀನೆ ಕಾಣಾ, ಎಲೆ ಅಯ್ಯಾ. ಅಯ್ಯಾ, ನೀನು ಕಾರುಣ್ಯವುಳ್ಳ ಮಹದಾಶ್ರಯ ಕಾಣಾ, ಎಲೆ ಅಯ್ಯಾ. ನೀನು ಭಕ್ತದೇಹಿಕ ದೇವನಾದ ಕಾರಣ ಮಚ್ಚಿದೆನಯ್ಯಾ. ಒಲುಮೆಯ ಮಚ್ಚು ನಿಶ್ಚಯವೆಂದು ನಂಬಿದೆನಯ್ಯಾ. ಗುರುವೇ, ಕಪಿಲಸಿದ್ಧಮಲ್ಲಿಕಾರ್ಜುನಾ.