ವಚನ - 202     
 
ಆರೂಢದ ಮನದಲ್ಲಿ ನೀನೆ ನಿಂದ ಕಾರಣ ತೋರುವ ಶಿವಜ್ಞಾನದ ದೀಪ್ತಿ ಬಸವಣ್ಣನಯ್ಯಾ; ತೋರುವ ಬೀರುವ ಐಕ್ಯದ ಭಕ್ತಿ ಬಸವಣ್ಣನದಯ್ಯಾ, ನಿಜದಲ್ಲಿ ನಿಂದು ನಿರ್ವಯಲಾಯಿತ್ತಯ್ಯಾ ಬಸವಣ್ಣನ ಕರುಣದಿಂದ ಕಪಿಲಸಿದ್ಧಮಲ್ಲಿನಾಥಯ್ಯಾ.