ವಚನ - 211     
 
ಆವ ಕಳೆಯೆಂಬುದು ನೀನೆಯಾದೆ, ಬಸವಲಿಂಗವೆ. ಮುಕ್ತಿಗೆ ಮೂಲಸ್ವರೂಪು ನೀನಾಗಿ ನಿಂದ ರೂಪು. ನಿನ್ನ್ಲಲ್ಲಿಯೆ ತಲ್ಲೀಯವಾಯಿತ್ತು, ಬಸವಗುರುವೆ. ನಿಯಮಾಚಾರದ ರೂಪು ನಿನ್ನ್ಲಲ್ಲಿಯೆ ತಲ್ಲೀಯವಾಯಿತ್ತಯ್ಯಾ, ಕಪಿಲಸಿದ್ಧಮಲ್ಲಿನಾಥನ ಗುರು ಬಸವಾ.