ವಚನ - 213     
 
ಆವನಾಗಿ ಒಬ್ಬನು ಅವಿಚಾರದಿಂದ ಶಿರಸ್ಸಿನ ಮೇಲೆ ಕೈದುವಿಕ್ಕುಗೆಯ, ಮೇಣು ಗಂಧಾಕ್ಷತೆ ಪುಷ್ಪದಲ್ಲಿ ಪೂಜೆ ಮಾಡುಗೆಯ; ಪೂಜೆ ಮಾಡಿದಡೆ ಮನ ವಿಚ್ಛಂದವಾಗದೊಂದೆಯಂದದಲ್ಲಿಪ್ಪಂತಪ್ಪ ನಿಮ್ಮದೊಂದು ಸಮತಾಗುಣ ಎನ್ನನೆಂದು ಬಂದು ಪೊದ್ದಿಪ್ಪುದು ಹೇಳಾ ಕಪಿಲಸಿದ್ಧಮಲ್ಲಿಕಾರ್ಜುನಾ.