ವಚನ - 221     
 
ಆವಾವ ದೆಸೆಗೆ ಬಾಯ ಬಿಟ್ಟು ಅರಸಿ ಕಾಣದೆ ಕಂಗೆಡುತ್ತಿದ್ದೆನಯ್ಯಾ. ದೇವಾ, ಈ ಬಾಯ ಬಿಡುವುದ ಮಾಣಿಸಿ, ಎನಗೆ ಪರಮಪ್ರಸಾದವ ಕರುಣಿಸಿ ರಕ್ಷಿಸಯ್ಯಾ; ಕಪಿಲಸಿದ್ಧಮಲ್ಲಿನಾಥಯ್ಯಾ, ನಿಮ್ಮ ಧರ್ಮವಯ್ಯಾ.