ವಚನ - 67     
 
ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ, ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ. ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯಾ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯಾ.