ವಚನ - 299     
 
ಎನಿತುಂ ತ್ರಿಭುವನಂಗಳು ತನಗಾದಡೆ ಅನಿತರಲಿ ತುಷ್ಟಿವಡೆಯಳು, ಈ ಆಸೆಯೆಂಬವಳಿಂದವೆ ನಿಮ್ಮೆಡೆಗಾಣದಿಪ್ಪೆನು. ಈ ಆಸೆಯೆಂಬವಳನೆಂದಿಂಗೆ ನೀಗಿ ಎಂದು ನಿಮ್ಮನೊಡಗೂಡಿ ಬೇರಾಗದೆಂದಿಪ್ಪೆನೊ ಕಪಿಲಸಿದ್ಧಮಲ್ಲಿಕಾರ್ಜುನಾ.