ವಚನ - 469     
 
ಕ್ರೀಯಲ್ಲಿ ಮಗ್ನವಾದ ಬಳಿಕ ಐಕ್ಯದ ವಿಚಾರ ಬೇಕಿಲ್ಲ ; ಗುರುವಿನ ಗದ್ದುಗೆ ಬೇಕಿಲ್ಲ ; ಗಣಸಮ್ಮೇಳನದ ಪೂಜೆ ಮೊದಲೆ ಬೇಕಿಲ್ಲ ; ಕಪಿಲಸಿದ್ಧಮಲ್ಲಿಕಾರ್ಜುನನಂಗೆ ನಿನಗೆ ಭೇದವಿಲ್ಲೆಂಬುವುದು ಈಗಳೆ ಬೇಕಿಲ್ಲ, ಕೇಳಾ ಪ್ರಭುವೆ.