ವಚನ - 475     
 
ಗಂಡ ಬಾರನು ಎನ್ನ ತವರೂರಿಗೆ ಹೋಗುವೆನೆನಲು, ನೋಡೆ, ನೋಡೆಲಗವ್ವಾ ಬೇಟೆಯನಾಡುವ ನಾಯತಲೆಯ ಕೊಯ್ದಿಟ್ಟು, ತಾ ಬೇರೆ ಬೇಟಕಾರನಾದ. ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನ ನೆಲೆಯಲ್ಲಿ ನಿಲವ ಕೊಂಡನು; ಹುಚ್ಚನ ಸಂಗ ನಿಶ್ಚಯವಾಯಿತು.