ವಚನ - 478     
 
ಗಮನವರಿತು ಸುಳಿಯಬಲ್ಲಡೆ ಆಪ್ಯಾಯನವರಿತು ಉಣಬಲ್ಲಡೆ ಇಚ್ಛೆಯರಿತು ಬೇಡಬಲ್ಲಡೆ ಈ ತ್ರಿವಿಧ ಗುಣದ ಅನುವ ಬಲ್ಲವರು ದೇವರಿಗೆ ದೇವರಾಗಿಪ್ಪರು ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನ ದೇವರ ದೇವಾ.