ವಚನ - 483     
 
ಗುರು ತೋರಿದನು ಲಿಂಗ- ಜಂಗಮವ. ಪಾದೋದಕ-ಪ್ರಸಾದವ ಕೊಳಹೇಳಿದನಲ್ಲದೆ ಇವ ತೊರೆಯ ಹೇಳಿದನೆ? ಅಹಮ್ಮೆಂದು ಪ್ರಸಾದದ್ರೋಹಿಗಳಾಗಿ, ನಾನೆ ಎಂದು ಲಿಂಗದ್ರೋಹಿಗಳಾಗಿ, ವಿಭೂತಿ-ರುದ್ರಾಕ್ಷಿ ಸಾಕ್ಷಾತ್ ಶಿವನೆಂದರಿಯದೆ, ಅವರಾಚರಣೆಯ ನೋಡಿ ನಿಂದಿಸಿ ಜಂಗಮದ್ರೋಹಿಗಳಾಗ ಹೇಳಿದನೆ? ಜಂಗಮದಲ್ಲಿ ಜಾತಿಯ, ಪ್ರಸಾದದಲ್ಲಿ ರುಚಿಯ, ಲಿಂಗದಲ್ಲಿ ಮೃದುವನರಸುವ, ಸಮಯದಲ್ಲಿ ವಿಶ್ವಾಸವಿಲ್ಲದ ಮಿಟ್ಟಿಯ ಭಂಡರ ತೋರದಿರಯ್ಯಾ ಎನಗೆ ಕಪಿಲಸಿದ್ಧಮಲ್ಲಿಕಾರ್ಜುನಾ.