ವಚನ - 511     
 
ಘರ್ಜನೆಯಿಂ ಸಿಡಿಲು ಅಡಸಿ ಬಂದು ಪೊಯ್ವುತ್ತಿರಲಿ, ಪೊಯ್ಯವೊಲ್ಲದೆ ವಾಯವಿಮಾನಂಗಳಿಂದ [ಎತ್ತಿಕೊಳ್ಗೆ] ಎತ್ತಿಕೊಂಡಡೆ, ಮನವಿಚ್ಛಂದವಾಗದೊಂದೆಯಂದದಲ್ಲಿಪ್ಪಂತಪ್ಪ ನಿಮ್ಮದೊಂದು ಸಮತಾಗುಣ ಎನ್ನನೆಂದು ಬಂದು ಪೊದ್ದಿಪ್ಪುದು ಹೇಳಾ, ಕಪಿಲಸಿದ್ಧಮಲ್ಲಿಕಾರ್ಜುನಾ.