ವಚನ - 543     
 
ಜ್ಞಾನಿಗಳು ತಾವಾದ ಬಳಿಕ, ಅನ್ಯರ ಸ್ತೋತ್ರಕ್ಕೆ ಒಳಗಾಗಬಾರದು. ಜ್ಞಾನಿಗಳು ತಾವಾದ ಬಳಿಕ, ಗುರುಹಿರಿಯರಿಗಂಜಿ ನಡೆಯಬೇಕು. ಜ್ಞಾನಿಗಳು ತಾವಾದ ಬಳಿಕ, ಅನ್ಯಸ್ತ್ರೀ ತನ್ನ ಮಾತೆಯಂತಿರಬೇಕು ಕಪಿಲಸಿದ್ಧಮಲ್ಲಿಕಾರ್ಜುನಾ.